ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆಗೆ ಸಿದ್ಧ : ಕುಮಾರಸ್ವಾಮಿ ತಿರುಗೇಟು

By Staff
|
Google Oneindia Kannada News

ರಾಜೀನಾಮೆಗೆ ಸಿದ್ಧ : ಕುಮಾರಸ್ವಾಮಿ ತಿರುಗೇಟು
ಸದಾನಂದಗೌಡ ಸಮರ್ಥನೆ, ರಾಜ್ಯ ರಾಜಕೀಯದಲ್ಲಿ ದಿಢೀರ್‌ ಸಂಚಲನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಗತ್ಯ ಬಿದ್ದರೆ ರಾಜೀನಾಮೆ ನೀಡುವೆ ಎಂದು ಘೋಷಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸಮ್ಮಿಶ್ರ ಸರ್ಕಾರ ಬೇಸರ ತರಿಸಿದ್ದರೆ ಹೇಳಲಿ, ರಾಜೀನಾಮೆ ಬಿಸಾಡಿ ಚುನಾವಣೆಗೆ ಹೋಗುತ್ತೇವೆ. ಆದರೆ ಬಿಜೆಪಿಯವರು ನನ್ನ ಮೇಲೆ ಸವಾರಿ ಮಾಡಲು ಅವಕಾಶ ಕೊಡುವುದಿಲ್ಲ. ನಾನು ತೆವಲು ತೀರಿಸಿಕೊಳ್ಳಲು ಈ ರಾಜ್ಯದ ಮುಖ್ಯಮಂತ್ರಿಯಾಗಿಲ್ಲ. ಮುಖ್ಯಮಂತ್ರಿ ಮಾಡಿ ಅಂತಲೂ ಅರ್ಜಿ ಹಿಡಿದು ಹೋಗಿರಲಿಲ್ಲ ಎಂದು ಎದುರೇಟು ನೀಡಿದ್ದಾರೆ.

ನಿಗಮ-ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಸದಾನಂದಗೌಡ ಟೀಕಿಸಿದ್ದರು. ಅಲ್ಲದೆ ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು.

ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ, ಸಮ್ಮಿಶ್ರ ಧರ್ಮಕ್ಕೆ ವಿರುದ್ಧವಾಗಿ ಏನೂ ಮಾಡಿಲ್ಲ. ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದ ನಂತರವಷ್ಟೇ ನೇಮಕ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಇದೀಗ ರಾಜೀನಾಮೆ ಕೊಡಲೂ ತಾವು ಸಿದ್ಧ ಎಂದು ಹೇಳುವುದರ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಹೊರಬಿದ್ದಂತಾಗಿದೆ.

ಇನ್ನೊಂದೆಡೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಸದಾನಂದಗೌಡ, ಮುಖ್ಯಮಂತ್ರಿಗಳಿಗೆ ಬರೆದ ಪತ್ರ ರಹಸ್ಯವಾಗಿಡುವುದು ಈಗಿನ ಪರಿಸ್ಥಿತಿಯಲ್ಲಿ ಕಷ್ಟವಾಗಿದ್ದರಿಂದ, ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆಯೇ ಹೊರತು ಅನ್ಯ ಉದ್ದೇಶವಿಲ್ಲ. ಅಲ್ಲದೆ ಆಡಳಿತಕ್ಕಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆಗಳು ಕುತೂಹಲ ಹುಟ್ಟುಹಾಕಿದ್ದು, ಸಮ್ಮಿಶ್ರ ಸರ್ಕಾರದ ಭವಿಷ್ಯವೇನು ಎಂಬ ಪ್ರಶ್ನೆ ದಿಢೀರನೇ ಕಾಣಿಸಿಕೊಂಡಿದೆ.

(ಏಜೆನ್ಸೀಸ್‌)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X