ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿರಿಗನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ : ಆಡ್ವಾಣಿ ಬೆಂಬಲ

By Staff
|
Google Oneindia Kannada News

ಸಿರಿಗನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ : ಆಡ್ವಾಣಿ ಬೆಂಬಲ
ಮೇ.3ರಿಂದ ರಾಜ್ಯದಲ್ಲಿ ಭಾರತ್‌ ಸುರಕ್ಷಾ ಯಾತ್ರ ಆರಂಭ

ಬೆಂಗಳೂರು : ಬಿಜೆಪಿ ಮುಖಂಡ ಮತ್ತು ಲೋಕಸಭೆ ಪ್ರತಿಪಕ್ಷದ ನಾಯಕ ಎಲ್‌.ಕೆ.ಆಡ್ವಾಣಿ, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರ ನಿಯೋಗದೊಂದಿಗೆ ಮಾತನಾಡಿದ ಅವರು, ಶಾಸ್ತ್ರೀಯ ಭಾಷೆಯ ಗೌರವ ಹೊಂದಲು ಕನ್ನಡ ಭಾಷೆಗೆ ಅರ್ಹತೆ ಇದೆ. ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಪೂರೈಸುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದರು.

ವಿಧಾನಸಭೆ ಚುನಾವಣಾ ಭಾಷಣದ ಹಿನ್ನೆಲೆಯಲ್ಲಿ, ಹೊಸೂರು ಮಾರ್ಗವಾಗಿ ತಮಿಳುನಾಡಿಗೆ ತೆರಳಲು ಆಡ್ವಾಣಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ, ಆಡ್ವಾಣಿ ಅವರನ್ನು ಭೇಟಿ ಮಾಡಿ, ಕನ್ನಡ ಪರ ವಿಚಾರಗಳನ್ನು ಚರ್ಚಿಸಿತು.

ಮೇ.3ರಿಂದ ಯಾತ್ರೆ : ನಟ ರಾಜ್‌ಕುಮಾರ್‌ ನಿಧನದಿಂದ ರದ್ದಾಗಿದ್ದ ಭಾರತ್‌ ಸುರಕ್ಷಾ ಯಾತ್ರೆ ಮೇ.3ರಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಮುಂದುವರೆಯಲಿದೆ. ಎಲ್‌.ಕೆ.ಆಡ್ವಾಣಿ ಅವರು, ಬಿಜಾಪುರ, ಬಾಗಲಕೋಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X