ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೊಂದಲ ಬಿಕ್ಕಟ್ಟಿನ ಮಧ್ಯೆಯೇ ಸಿಇಟಿ ಪರೀಕ್ಷೆ ಆರಂಭ

By Staff
|
Google Oneindia Kannada News

ಗೊಂದಲ ಬಿಕ್ಕಟ್ಟಿನ ಮಧ್ಯೆಯೇ ಸಿಇಟಿ ಪರೀಕ್ಷೆ ಆರಂಭ
ಸಿಇಟಿ ಸಮಸ್ಯೆ ಚರ್ಚಿಸಲು ಬುಧವಾರ ಉನ್ನತ ಮಟ್ಟದ ಸಭೆ -ಶಂಕರಮೂರ್ತಿ

ಬೆಂಗಳೂರು : ವೃತ್ತಿ ಶಿಕ್ಷಣ ಪ್ರವೇಶ ಬಿಕ್ಕಟ್ಟಿನ ಮಧ್ಯೆಯೇ ಸಿಇಟಿ ಪರೀಕ್ಷೆ ಮಂಗಳವಾರ ರಾಜ್ಯದಲ್ಲಿ ಆರಂಭಗೊಂಡಿದೆ. 88,765 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ.

ಸಿಇಟಿ ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾರ್ಗೋಪಾಯಗಳನ್ನು ಕಂಡು ಹಿಡಿಯಲು ಬುಧವಾರ(ಮೇ.10), ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಸರ್ಕಾರ ಕರೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿ.ಎಚ್‌.ಶಂಕರಮೂರ್ತಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕಾನೂನು ತಜ್ಞರು ಸೇರಿದಂತೆ, ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವರು. ಸಭೆಯಲ್ಲಿ ಸಿಇಟಿ ಬಿಕ್ಕಟ್ಟಿನ ಮಾರ್ಗೋಪಾಯಗಳನ್ನು ಚರ್ಚಿಸಲಾಗುವುದು. ಸಭೆಯಲ್ಲಿ ಸರ್ವಮತದ ನಿಲುವು ವ್ಯಕ್ತವಾದರೆ, ಸರ್ಕಾರ ಸುಗ್ರೀವಾಜ್ಞೆ ತರಲಿದೆ ಎಂದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X