ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ವರುಣನ ಆರ್ಭಟ

By Staff
|
Google Oneindia Kannada News

ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ವರುಣನ ಆರ್ಭಟ
ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಗಳಿವೆ, ಯಾವುದಕ್ಕೂ ನಿಮ್ಮ ಕೈನಲ್ಲೊಂದು ಛತ್ರಿಯಿರಲಿ!

ಬೆಂಗಳೂರು : ಕಳೆದೆರಡು ದಿನಗಳಿಂದ ವರುಣನ ಆರ್ಭಟ, ರಾಜಧಾನಿ ನಗರದಲ್ಲಿ ಬಿರುಸಾಗಿದೆ. ಶುಕ್ರವಾರ ಮತ್ತು ಶನಿವಾರವೂ ನಗರದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯಿಂದ ನಗರದಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಸಂಜೆಯಿಂದ ಮಧ್ಯರಾತ್ರಿತನಕ ಮಳೆ ಸುರಿದಿದೆ. ರಾಜಾಜಿನಗರ, ಮಲ್ಲೇಶ್ವರ ಮತ್ತಿತರ ಪ್ರದೇಶಗಳಲ್ಲಿ ಹತ್ತಾರು ಮರಗಳು ನೆಲಕ್ಕುರುಳಿವೆ. ಕೆಲವೆಡೆ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟಿರುವುದೂ ವರದಿಯಾಗಿದೆ.

ಮಳೆ ಪರಿಣಾಮ ಟ್ರಾಫಿಕ್‌ ಕಿರಿಕಿರಿ ಇನ್ನಷ್ಟು ಹೆಚ್ಚಿದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಅವನ ಕರುಣೆ ರೈತರ ಮೇಲೂ ಬೀಳಲಿ...

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X