ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ.ಬಸವರಾಜುಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

By Staff
|
Google Oneindia Kannada News

ಡಾ.ಬಸವರಾಜುಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ನಾನು ಪ್ರಶಸ್ತಿ ಬಯಸಿರಲಿಲ್ಲ, ಎಲ್ಲವೂ ದೇವರ ದಯೆ...

ಬೆಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಸಕ್ತ ಸಾಲಿನ ಭಾಷಾ ಸಮ್ಮಾನ್‌ ಪ್ರಶಸ್ತಿ ನಾಡಿನ ಹಿರಿಯ ಸಂಶೋಧಕ, ಕವಿ ಡಾ.ಎಲ್‌.ಬಸವರಾಜು ಅವರಿಗೆ ಸಂದಿದೆ.

ಭೋಪಾಲ್‌ನಲ್ಲಿ ಆ.23ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಬಸವರಾಜು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. 50ಸಾವಿರ ರೂ. ನಗದು ಹಾಗೂ ಫಲಕವನ್ನು ಪ್ರಶಸ್ತಿ ಒಳಗೊಂಡಿದೆ.

ಪಂಪನ ಆದಿ ಪುರಾಣ ಮತ್ತು ವಿಕ್ರಮಾರ್ಜುನ ವಿಜಯ ಕೃತಿಗಳಿಗೆ ಬಸವರಾಜು ಅವರು, ವಿದ್ವತ್‌ಪೂರ್ಣ ವ್ಯಾಖ್ಯಾನಗಳನ್ನು ಬರೆದಿದ್ದು, ವಚನ ಸಾಹಿತ್ಯ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ 45ಕ್ಕೂ ಅಧಿಕ ಮಹತ್ವದ ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ.

ಅವನ ದಯೆ : ನನಗೀಗ 82ವರ್ಷ. ಈ ಪ್ರಶಸ್ತಿ ನನಗೆ ಭಗವಂತ ದಯಪಾಲಿಸಿದ ವರ ಎಂದು ಪ್ರಶಸ್ತಿ ಪುರಸ್ಕೃತ ಬಸವರಾಜು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X