ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಎಂಕೆಆರ್‌ವಿ ಕಾಲೇಜಿಗೆ ಬಾಂಬ್‌ ಬೆದರಿಕೆ ಕರೆ

By Staff
|
Google Oneindia Kannada News

ಎನ್‌ಎಂಕೆಆರ್‌ವಿ ಕಾಲೇಜಿಗೆ ಬಾಂಬ್‌ ಬೆದರಿಕೆ ಕರೆ
ವಿದ್ಯಾರ್ಥಿನಿಯರಲ್ಲಿ ಆತಂಕ, ಮಂಗಳವಾರ ಎಂದಿನಂತೆ ತರಗತಿ ಆರಂಭ

ಬೆಂಗಳೂರು : ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ಬಾಂಬ್‌ ಬೆದರಿಕೆಯಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದೊಂದು ಹುಸಿ ಬೆದರಿಕೆ ಎಂಬುದು ಸ್ಪಷ್ಟವಾಗಿದ್ದು, ಮಂಗಳವಾರ ತರಗತಿಗಳು ಎಂದಿನಂತೆಯೇ ಆರಂಭಗೊಂಡಿವೆ.

ಶ್ವಾನದಳದೊಂದಿಗೆ ಕಾಲೇಜಿಗೆ ಆಗಮಿಸಿದ ಪೊಲೀಸರು ತಪಾಸಣೆ ನಂತರ, ಇದೊಂದು ಕಿಡಿಗೇಡಿಗಳ ಕೃತ್ಯ ಎಂದು ತಿಳಿಸಿದ್ದಾರೆ. ಗೊಂದಲಕ್ಕೆ ಕಾರಣವಾದ ವ್ಯಕ್ತಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಘಟನೆ ವಿವರ : ಎಸ್‌ಐ ಹನುಮಂತಪ್ಪ ಎಂದು ಹೇಳಿಕೊಂಡ ವ್ಯಕ್ತಿಯಾಬ್ಬ, ಸೋಮವಾರ ಕಾಲೇಜಿಗೆ ಕರೆ ಮಾಡಿ ಬಾಂಬ್‌ ಇಟ್ಟಿರುವುದಾಗಿ ತಿಳಿಸಿದ. ಅದು ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಳ್ಳಲಿದೆ ಎಂದೂ ಬೆದರಿಸಿದ. ತಕ್ಷಣ ವಿದ್ಯಾರ್ಥಿನಿಯರು ಮತ್ತು ಉಪನ್ಯಾಸಕರು ಕಾಲೇಜಿನ ಆವರಣದಿಂದ ಹೊರ ನಡೆದರು. ನಂತರ ವ್ಯಾಪಕ ಶೋಧನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬೆದರಿಕೆ ಎಂಬುದನ್ನು ಪ್ರಕಟಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X