ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ನಿತ್ಯೋತ್ಸವ ಕವಿ

By Staff
|
Google Oneindia Kannada News

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ನಿತ್ಯೋತ್ಸವ ಕವಿ
ತೇಜಸ್ವಿ, ಶೇಷಗಿರಿ ರಾವ್‌, ಚಿದಾನಂದಮೂರ್ತಿ ಹೆಸರುಗಳೂ ಪ್ರಸ್ತಾಪ

ಬೆಂಗಳೂರು : ಶಿವಮೊಗ್ಗದಲ್ಲಿ ನಡೆಯಲಿರುವ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ, ನಿತ್ಯೋತ್ಸವ ಕವಿ ಡಾ.ಕೆ.ಎಸ್‌. ನಿಸಾರ್‌ ಅಹಮದ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆಯನ್ನು ಅಂತಿಮಗೊಳಿಸಲಾಯಿತು.

ಡಿಸೆಂಬರ್‌ 20ರಿಂದ 23ರವರೆಗೆ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷ ಪೂರ್ಣಚಂದ್ರ ತೇಜಸ್ವಿ, ಯಶವಂತ್‌ ಚಿತ್ತಾಲ, ವಿದ್ವಾಂಸ ಆರ್‌. ಬಸವರಾಜು, ಡಾ.ಎಂ.ಚಿದಾನಂದಮೂರ್ತಿ, ಡಾ.ಎಲ್‌. ಎಸ್‌. ಶೇಷಗಿರಿ ರಾವ್‌ ಮತ್ತಿತರರ ಹೆಸರುಗಳು ಕೇಳಿಬಂದಿದ್ದವು.

ಪ್ರತಿಕ್ರಿಯೆ : ಅಧ್ಯಕ್ಷರಾಗಿ ಆಯ್ಕೆಯಾದ ಸುದ್ದಿಯನ್ನು ಕೇಳಿದ 70ವರ್ಷದ ನಿಸಾರ್‌ ಅಹಮದ್‌ ಸಂತಸ ವ್ಯಕ್ತಪಡಿಸಿದ್ದಾರೆ. ‘ನಿಜಕ್ಕೂ ಇದೇನು ಕನಸೋ, ನನಸೋ ಅರ್ಥವಾಗುತ್ತಿಲ್ಲ. ಇದು ಕನ್ನಡಮ್ಮನ ಕೃಪೆ, ಕನ್ನಡಿಗರು ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಗಳ ಫಲ’ ಎಂದು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X