ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಬಾಗಿಲಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ?

By Staff
|
Google Oneindia Kannada News

ಕಾಂಗ್ರೆಸ್‌ ಬಾಗಿಲಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ?
ಕಾರ್ಯಕರ್ತರ ಸಭೆಯಲ್ಲಿ ಮುನ್ಸೂಚನೆ, ಜೆಡಿಎಸ್‌ನಲ್ಲಿ ಮುಂದುವರಿದ ಅತೃಪ್ತಿ

ಲಿಂಗಸುಗೂರು : ಶಾಸಕ ಅಮರೇಗೌಡ ಬಯ್ಯಾಪುರ ಜಾತ್ಯತೀತ ಜನತಾದಳ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಸುದ್ದಿ ತಾಲ್ಲೂಕಿನಾದ್ಯಂತ ಹಬ್ಬಿದೆ.

ಸ್ವತಃ ಅಮರೇಗೌಡ ಬಯ್ಯಾಪುರ, ಪಕ್ಷ ಸಂಘಟನೆ ನೆಪದಲ್ಲಿ ಇತ್ತೀಚೆಗೆ ತಾಲ್ಲೂಕಿನ ಮಸ್ಕಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್‌ ಸೇರುವ ಇರಾದೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು ಎಂದು ನಂಬಲರ್ಹ ಮೂಲಗಳು ಹೇಳಿವೆ.

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಅವರು, ಆನಂತರ ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಯಾಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬಕ್ಕೆ ಆಪ್ತರಾಗಿರುವ ಅವರು, ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರ ರಚನಾನಂತರದ ರಾಜಕೀಯ ಬೆಳವಣಿಗೆಗಳಿಂದ ಬೇಸರಗೊಂಡಿದ್ದಾರೆ. ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X