ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಧ್ಯಮಗಳ ವಿರುದ್ಧ ಮಾನಹಾನಿ ಪ್ರಕರಣ - ಬಾಲಕೃಷ್ಣ

By Staff
|
Google Oneindia Kannada News

ಮಾಧ್ಯಮಗಳ ವಿರುದ್ಧ ಮಾನಹಾನಿ ಪ್ರಕರಣ - ಬಾಲಕೃಷ್ಣ
ಕವಿತಾ ಖಾತೆಗೂ ಲಂಚ ಪ್ರಕರಣಕ್ಕೂ ಏನ್‌ ಸಂಬಂಧ?

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಬಾಲಕೃಷ್ಣ ಗೌಡ ಅವರು, ಪತ್ರಿಕೆಗಳು ಮತ್ತು ಟೀವಿ ಚಾನೆಲ್‌ಗಳ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ವಿಧಾನ ಪರಿಷತ್‌ ಸದಸ್ಯ ಜನಾರ್ದನ ರೆಡ್ಡಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ಅವರ ವಿರುದ್ಧವೂ ಶೀಘ್ರದಲ್ಲಿಯೇ ಮಾನಹಾನಿ ಪ್ರಕರಣ ದಾಖಲಿಸುತ್ತೇನೆ ಎಂದರು.

ಗಣಿ ಲಂಚ ಪ್ರಕರಣಕ್ಕೂ ಕವಿತಾ ಅವರ ಖಾತೆಗೂ ಯಾವುದೇ ಸಂಬಂಧವಿಲ್ಲ. ಅವರು ಕಾನೂನುಬದ್ಧವಾಗಿ ಆಸ್ತಿ ಹೊಂದಿದ್ದು, ಅಗತ್ಯ ತೆರಿಗೆಯನ್ನು ಪಾವತಿಸುತ್ತಿದ್ದಾರೆ. ಎಲ್ಲವೂ ಪಾರದರ್ಶಕವಾಗಿದೆ. ಆದರೆ ರೆಡ್ಡಿ ಮಾಧ್ಯಮಗಳ ದಾರಿ ತಪ್ಪಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X