ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ರ್ಯಾಲಿಯಲ್ಲಿ ರಕ್ಷಣಾ ವೇದಿಕೆ ಕಪ್ಪು ಬಾವುಟ

By Staff
|
Google Oneindia Kannada News

ಸೋನಿಯಾ ರ್ಯಾಲಿಯಲ್ಲಿ ರಕ್ಷಣಾ ವೇದಿಕೆ ಕಪ್ಪು ಬಾವುಟ
ಕಾಂಗ್ರೆಸ್‌ ರ್ಯಾಲಿ : ಟ್ರಾಫಿಕ್‌ ತೊಂದರೆ, ಲಾಠಿ ಪ್ರಹಾರ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿತ ಕಾಯಬೇಕೆಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ ನೇತೃತ್ವದಲ್ಲಿ ಭಾನುವಾರ(ಸೆಪ್ಟೆಂಬರ್‌ 3) ನಡೆದ ರಾಜ್ಯ ಮಟ್ಟದ ಕಾಂಗ್ರೆಸ್‌ ರ್ಯಾಲಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ತಾನೇ ಸಲ್ಲಿಸಿದ್ದ ಅಫಿಡವಿಟ್‌ ದಿಢೀರನೇ ವಾಪಸು ಪಡೆದಿದೆ. ಇದರಿಂದ ಕರ್ನಾಟಕಕ್ಕೆ ಅನ್ಯಾಯವಾಗಲಿದೆ. ಸೋನಿಯಾ ಗಾಂಧಿ ಮಧ್ಯೆ ಪ್ರವೇಶಿಸಿ, ನ್ಯಾಯ ನೀಡಬೇಕೆಂದು ಖರ್ಗೆ ವಿನಂತಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರ್ಯಾಲಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುವುದರ ಮೂಲಕ ಕೇಂದ್ರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದರು. ಈ ಹಂತದಲ್ಲಿ ಪೊಲೀಸರು ವೇದಿಕೆ ಕಾರ್ಯಕರ್ತರನ್ನು ಬಂಧಿಸಿದರು.

ರ್ಯಾಲಿಯ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಸಾರಿಗೆ-ಸಂಚಾರ ವ್ಯತ್ಯಯ ಉಂಟಾಯಿತು. ಅಲ್ಲಲ್ಲಿ ಲಾಠಿ ಪ್ರಹಾರವೂ ನಡೆಯಿತು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X