ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ತಕರಾರು : ಸೆಪ್ಟೆಂಬರ್‌ 30ರಂದು ಕರ್ನಾಟಕ ಬಂದ್‌

By Staff
|
Google Oneindia Kannada News

ಗಡಿ ತಕರಾರು : ಸೆಪ್ಟೆಂಬರ್‌ 30ರಂದು ಕರ್ನಾಟಕ ಬಂದ್‌
ಗಡಿ ಕಾಯಲು ಶತಪ್ರಯತ್ನ.. ಮುಂದಿನ ದಿನಗಳಲ್ಲಿ ಚಳವಳಿ ತೀಕ್ಷ್ಣ: ಕನ್ನಡ ಸಂಘಟನೆಗಳ ಎಚ್ಚರಿಕೆ

ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಮಹಾರಾಷ್ಟ್ರ ಪರ ಧೋರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಮಧ್ಯೆ ಸೆ.30ರಂದು ಕರ್ನಾಟಕ ಬಂದ್‌ ನಡೆಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ.

ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ವಿವಾದ ಕುರಿತು, ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ನ್ಯಾಯಬದ್ಧ ಪ್ರಮಾಣ ಪತ್ರವನ್ನು ಸಲ್ಲಿಸಿತ್ತು. ಆದರೆ ಮಹಾರಾಷ್ಟ್ರದ ಒತ್ತಡಕ್ಕೆ ಮಣಿದು, ಪ್ರಮಾಣ ಪತ್ರವನ್ನು ಹಿಂದಕ್ಕೆ ಪಡೆದಿದೆ. ಕೇಂದ್ರದ ಮಲತಾಯಿ ಧೋರಣೆ ಖಂಡನೀಯ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯಲ್ಲಿ ಶಾಸಕ ವಾಟಾಳ್‌ ನಾಗರಾಜ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಚಂದ್ರಶೇಖರ ಪಾಟೀಲ, ನಿರ್ಮಾಪಕ ಸಾ.ರಾ.ಗೋವಿಂದ್‌, ರಾಮಣ್ಣ ಕೋಡಿ ಹೊಸಹಳ್ಳಿ ಮತ್ತಿತರ ಕನ್ನಡ ಹೋರಾಟಗಾರರು ಪಾಲ್ಗೊಂಡಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X