ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.15ರಂದು ಬಿಳಿಗಿರಿ ರಂಗನಬೆಟ್ಟಕ್ಕೆ ರಾಷ್ಟ್ರಪತಿ ಆಗಮನ

By Staff
|
Google Oneindia Kannada News

ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರಕ್ಕೀಗ 25ರ ಸಂಭ್ರಮ..

ಚಾಮರಾಜನಗರ : ರಾಷ್ಟ್ರಪತಿ ಎ.ಪಿ.ಜೆ.ಕಲಾಂರ ಸ್ವಾಗತಕ್ಕೆ ಬಿಳಿಗಿರಿ ರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ ಸಜ್ಜಾಗಿದೆ.

ಬುಡಕಟ್ಟು ಜನರ ಅಭಿವೃದ್ಧಿಗೆ ಶ್ರಮಿಸುತ್ತಿರುವ, ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ 25ನೇ ವಾರ್ಷಿಕೋತ್ಸವ ಅ.15ರಂದು ನಡೆಯಲಿದೆ. ಈ ಸಮಾರಂಭದಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಅವರು ಮಾಹಿತಿ ಸಂಪನ್ಮೂಲ ಕೇಂದ್ರವನ್ನು ಉದ್ಘಾಟಿಸುವುರು. ನಂತರ ಸೋಲಿಗರ ಮಕ್ಕಳೊಂದಿಗೆ ಮಾತುಕತೆ ನಡೆಸುವರು.

ಪ್ರಸಕ್ತ ಸಾಲಿನ ‘ಸ್ವಾಮಿ ವಿವೇಕಾನಂದ ಸೇವಾ ಪ್ರಶಸ್ತಿ ’ ಪಡೆದಿರುವ ಸಿ.ಮಾದೇಗೌಡ, ಎಚ್‌.ಭಾಗ್ಯ ಅವರಿಗೆ ರಾಷ್ಟ್ರಪತಿ ಅಬ್ದುಲ್‌ ಕಲಾಂ, ಪ್ರಶಸ್ತಿ ವಿತರಿಸುವರು. ಸಮಾರಂಭದಲ್ಲಿ ರಾಜ್ಯಪಾಲ ಟಿ.ಎನ್‌.ಚತುರ್ವೇದಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಟಿ.ಜಯಕುಮಾರ್‌, ಮಾಜಿ ಲೋಕಾಯುಕ್ತ ವೆಂಕಟಾಚಲ ಪಾಲ್ಗೊಳ್ಳುವರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X