ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೇಪ್‌ ಪ್ರಕರಣ : ದಾವಣಗೆರೆ ಸಮೀಪ ಗುಂಪು ಗಲಭೆ

By Staff
|
Google Oneindia Kannada News

ದಾವಣಗೆರೆ : ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ನೀಲಗುಂದ ಗ್ರಾಮ ಬುಧವಾರ ಉದ್ರಿಕ್ತಗೊಂಡಿದೆ. ಅಪ್ರಾಪ್ತ ಬಾಲಕಿ ಮೇಲೆ ಕಳೆದ ವಾರದ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣ, ಈಗ ಎರಡು ಗುಂಪುಗಳ ನಡುವೆ ವೈಮನಸ್ಸಿಗೆ ಕಾರಣವಾಗಿದೆ.

ಕಲ್ಲುತೂರಾಟದಿಂದ ಕೆಲವರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಗ್ರಾಮದಲ್ಲಿ ಮನೆಗಳು ಮತ್ತು ಕೆಲವು ವಾಹನಗಳು ಜಖಂಗೊಂಡಿವೆ. ಪೊಲೀಸರು ಸಕಾಲಕ್ಕೆ ಮಧ್ಯೆ ಪ್ರವೇಶಿಸಿದ ಕಾರಣ, ದೊಡ್ಡ ಅನಾಹುತ ತಪ್ಪಿದಂತಾಗಿದೆ.

ದಾವಣಗೆರೆಯ ಹೆಚ್ಚುವರಿ ಪೊಲೀಸ್‌ ಪಡೆ ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೂಲಗಳು ಹೇಳಿವೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X