ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಳಿಗಿರಿರಂಗನಬೆಟ್ಟದಲ್ಲಿ ಕಲಾಂ ಹುಟ್ಟುಹಬ್ಬ ಆಚರಣೆ
ಚಾಮರಾಜನಗರ : ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಭಾನುವಾರ ತಮ್ಮ 76ನೇ ಹುಟ್ಟುಹಬ್ಬವನ್ನು ಬಿಳಿಗಿರಿರಂಗನಬೆಟ್ಟದ ಗಿರಿಜನರೊಂದಿಗೆ ಆಚರಿಸಿಕೊಂಡರು.
ಬಿಳಿಗಿರಿರಂಗನಬೆಟ್ಟದಲ್ಲಿರುವ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಗಿರಿಜನ ಮಕ್ಕಳು ಕನ್ನಡ, ತಮಿಳು ಹಾಗೂ ಇಂಗ್ಲಿಷ್ನಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿದರು. ಮಕ್ಕಳು ಹೂಗುಚ್ಛ ಹಾಗೂ ಶುಭಾಶಯ ಪತ್ರವನ್ನೂ ನೀಡಿದರು. ಕಲಾಂ ಹರ್ಷದಿಂದ ಸ್ವೀಕರಿಸಿದರು.
ರಾಜ್ಯಪಾಲ ಟಿ.ಎನ್.ಚತುರ್ವೇದಿ, ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಟಿ.ಜಯಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಷ್ಟ್ರಪತಿಯಾದನಂತರ ಕಲಾಂ ನವದೆಹಲಿಯಾಚೆಯೇ ತಮ್ಮೆಲ್ಲ ಹುಟ್ಟುಹಬ್ಬಗಳನ್ನು ಆಚರಿಸಿಕೊಂಡಿದ್ದಾರೆ. ಅವರು ಕಳೆದ ವರ್ಷ ತಮ್ಮ ಹುಟ್ಟುಹಬ್ಬವನ್ನು, ಸುತ್ತೂರುಮಠದ ಶಾಲೆಯ ಬಡವಿದ್ಯಾರ್ಥಿಗಳ ಮಧ್ಯದಲ್ಲಿ ಆಚರಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
(ಯುಎನ್ಐ)
Comments
Story first published: Sunday, October 15, 2006, 23:53 [IST]