ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಧರ್ಮಸ್ಥಳ : ಜ.28ರಿಂದ ಬಾಹುಬಲಿಗೆ ಮಸ್ತಕಾಭಿಷೇಕ
ಧರ್ಮಸ್ಥಳ : 2007ರ ಜನವರಿ 28ರಿಂದ ಫೆ.2ರವರೆಗೆ ಲೋಕ ಕಲ್ಯಾಣಕ್ಕಾಗಿ, ಬಾಹುಬಲಿಗೆ ಮಹಾಮಸ್ತಾಕಾಭಿಷೇಕ ಕಾರ್ಯಕ್ರಮವನ್ನು ಧರ್ಮಸ್ಥಳದಲ್ಲಿ ಏರ್ಪಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಬಾಹುಬಲಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿ 25ವರ್ಷಗಳಾಗಿವೆ. ಈ ರಜತ ಮಹೋತ್ಸವ ಸಂಭ್ರಮ ಮತ್ತು ಮಹಾಮಸ್ತಾಕಾಭಿಷೇಕ ಸಂಭ್ರಮ ಜೊತೆಯಾಗಿವೆ ಎಂದರು.
ಈ ಸಂದರ್ಭದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಷ್ಟ್ರಮಟ್ಟದ ಭಾವೈಕ್ಯ ಸಮ್ಮೇಳನ, ವಿದ್ವತ್ ಸಮ್ಮೇಳನಗಳು ಜರುಗಲಿವೆ. ಜೊತೆಗೆ ಪಾರ್ಶ್ವನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, October 18, 2006, 23:53 [IST]