ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೀಪಾವಳಿ ಗಿಫ್ಟ್ : ಹೈಸ್ಕೂಲ್ ಹುಡುಗರಿಗೂ ಬೈಸಿಕಲ್
ಬೆಂಗಳೂರು : ದೀಪಾವಳಿ ಕೊಡುಗೆಯಾಗಿ ಪ್ರೌಢಶಾಲಾ ಬಾಲಕರಿಗೆ, ಸೈಕಲ್ ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಯೋಜನೆಯಿಂದ ಬಡತನ ರೇಖೆಯಿಂದ ಕೆಳಗಿರುವ 2,19,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದರು.
ಈಗಾಗಲೇ, 1,75,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಿಸಲಾಗಿದೆ. ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ . ರಾಜ್ಯದ ಹಣಕಾಸು ಸ್ಥಿತಿ ಉತ್ತಮವಾಗಿದೆ. ಹೀಗಾಗಿ ಯೋಜನೆ ಅನುಷ್ಠಾನಕ್ಕೆ ತೊಂದರೆಯಾಗದು. ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಯೋಜನೆ ವರದಾನ ಎಂದು ಅಭಿಪ್ರಾಯಪಟ್ಟರು.
(ಯುಎನ್ಐ)
Comments
Story first published: Thursday, October 19, 2006, 23:53 [IST]