ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಂಗ್ರೆಸ್ ಮುಖಂಡ ಪ್ರಭಾಕರ ಕೋರೆಗೆ ಗುಂಡೇಟು
ಬೆಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಭಾಕರ ಕೋರೆ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಕೋರೆ ಅವರ ಸ್ವಗ್ರಾಮವಾದ ಅಂಕ್ಲಿಯಲ್ಲಿ ಈ ದುರ್ಘಟನೆ ನಡೆದಿದೆ. ಸುದೀರ್ಘ ಅವಧಿಯ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಮಾತಿನ ಚಕಮಕಿ, ಗುಂಡಿನ ದಾಳಿಯಿಂದ ಮುಗಿದಿದೆ. ಕೋರೆ ಅವರ ಸಹೋದರನ ಮಗ ಜಗದೀಶ್ ಕೋರೆ, ಗುಂಡು ಹಾರಿಸಿದವ ಎಂದು ಗುರ್ತಿಸಲಾಗಿದೆ.
ಕೋರೆ ಅವರ ಬೆನ್ನಿಗೆ ಎರಡು ಗುಂಡುಗಳು ತಗುಲಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಯುಎನ್ಐ)
Comments
Story first published: Thursday, October 19, 2006, 23:53 [IST]