ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮರುಚುನಾವಣೆ : ಒಮ್ಮತದ ಅಭ್ಯರ್ಥಿ ಕಣಕ್ಕೆ...!?
ಬೆಂಗಳೂರು : ಚಾಮುಂಡೇಶ್ವರಿ ವಿಧಾನಸಭಾ ಮರುಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ನಿರ್ಧರಿಸಿವೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಈ ಸಂಬಂಧ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆಂದು ಮೂಲಗಳು ಹೇಳಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ, ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಅಭ್ಯರ್ಥಿ ಯಾರು? : ಸ್ಪರ್ಧೆ ಅವಕಾಶ ಜಾತ್ಯತೀತ ಜನತಾದಳಕ್ಕೆ ದೊರೆಯಲಿದೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿರುವುದರಿಂದ, ಇದೇ ಸಮುದಾಯಕ್ಕೆ ಸೇರಿದ ಎಸ್.ಶಿವಬಸಪ್ಪ ಅವರನ್ನು ಕಣಕ್ಕಿಳಿಸಲಾಗುವುದೆಂಬ ಮಾತುಗಳು ಕೇಳಿಬಂದಿವೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, November 13, 2006, 23:53 [IST]