ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸು. ಕೋರ್ಟ್‌ ತೀರ್ಪು : ಕುಮಾರಸ್ವಾಮಿಗೆ ಅತ್ಯಾನಂದ

By Staff
|
Google Oneindia Kannada News

ಬೆಂಗಳೂರು : ಸುಪ್ರೀಂ ಕೋರ್ಟ್‌ ಸೋಮವಾರ ನೀಡಿರುವ ತೀರ್ಪಿನಿಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖುಷಿಯಲ್ಲಿದ್ದಾರೆ. ತಮ್ಮ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿರುವುದು ಅವರಿಗೆ ಸಮಾಧಾನ ನೀಡಿದೆ.

ಕುಮಾರಸ್ವಾಮಿ ಆದಾಯಕ್ಕೂ ಅಧಿಕ ಆಸ್ತಿ ಹೊಂದಿದ್ದಾರೆ. ಜನಾರ್ದನ ರೆಡ್ಡಿ ಆರೋಪಿಸಿದಂತೆ 150ಕೋಟಿ ಲಂಚ ಪ್ರಕರಣ ಮತ್ತು ಇನ್ನಿತರ ಅಕ್ರಮ ಆಸ್ತಿಗಳ ಬಗ್ಗೆ ಸಿಬಿಐನಿಂದ ತನಿಖೆ ನಡೆಸಬೇಕು ಎಂದು ವಕೀಲ ಎ.ಆರ್‌.ಸುಭಾಷ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಳ್ಳಿಹಾಕಿದೆ.

ಅಲ್ಲದೇ ಸುರೇಶ್‌ಗೆ ನ್ಯಾಯಾಲಯ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಅರ್ಜಿ ಸಲ್ಲಿಸಿರುವ ವಕೀಲರ ನಡೆ ಸಂಶಯ ಹುಟ್ಟಿಸಿದೆ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

‘ಕಡೆಗೂ ಸತ್ಯಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ತೀರ್ಪಿನಿಂದ ಇನ್ನಷ್ಟು ಜನಕಲ್ಯಾಣ ಕೆಲಸ ಮಾಡಲು ಸ್ಫೂರ್ತಿ ಸಿಕ್ಕಿದೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ಸುದ್ದಿಗಾರರ ಬಳಿ ತಮ್ಮ ಸಂತೋಷವನ್ನು ಹಂಚಿಕೊಂಡರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X