ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಲಕಾಡಿನಲ್ಲಿ ಮುಖ್ಯಮಂತ್ರಿ : ಪೂಜೆ ಜೊತೆಗೆ ಭರವಸೆ

By Staff
|
Google Oneindia Kannada News

ತಲಕಾಡು : ಮರಳಿನ ಊರಾದ ತಲಕಾಡನ್ನು ರಾಜ್ಯದ ಪ್ರಮುಖ ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ತಲಕಾಡಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

ಶತಮಾನದಷ್ಟು ಹಳೆಯದಾದ ದೇವಸ್ಥಾನಗಳ ಮೂಲಕ ತಲಕಾಡು, ಈಗಾಗಲೇ ಪ್ರವಾಸಿಗರನ್ನು ಸೆಳೆದಿದೆ. ಇನ್ನೂ ಹೆಚ್ಚಿನ ಪ್ರವಾಸಿಗರನ್ನು ಈ ಭಾಗಕ್ಕೆ ಆಕರ್ಷಿಸಲು, ಪೂರಕ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲಿದೆ. ಮುಂದಿನ ಬಜೆಟ್‌ನಲ್ಲಿ ಅಗತ್ಯವಾದ ಹಣವನ್ನು ತೆಗೆದಿಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ತಲಕಾಡಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ಯಾತ್ರಿ ನಿವಾಸವನ್ನು ಉದ್ಘಾಟಿಸಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X