ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ಗೆ ಗೆಲುವು : ಯಡಿಯೂರಪ್ಪ

By Staff
|
Google Oneindia Kannada News

ಬೆಂಗಳೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ ಜೆಡಿಎಸ್‌ ಜಯಭೇರಿ ಬಾರಿಸಲಿದ್ದು, ಸಮ್ಮಿಶ್ರ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪ್ರೆಸ್‌ ಕ್ಲಬ್‌ ಬುಧವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಶಿವಬಸಪ್ಪ ಜಯಶಾಲಿಯಾಗಲಿದ್ದಾರೆ ಎಂದು ಹೇಳಿದ ಅವರು, ತಮ್ಮ ಪಕ್ಷ ಜೆಡಿಎಸ್‌ ಅಭ್ಯರ್ಥಿ ಬೆಂಬಲಿಸಿದ್ದನ್ನು ಸಮರ್ಥಿಸಿಕೊಂಡರು. ಪಕ್ಷದ ಈ ನಿಲುವಿನಿಂದ ಸಮ್ಮಿಶ್ರ ಸರ್ಕಾರ ಭದ್ರವಾಗಿದ್ದು, ತನ್ನ ಅವಧಿ ಪೂರ್ಣಗೊಳಿಸಲಿದೆ ಎಂಬ ಸಂದೇಶ ರವಾನಿಸಿದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ ನಡೆಸಲು ಅವಕಾಶ ನೀಡಿದರೆ, ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಎಂಬ ಕಾಂಗ್ರೆಸ್‌ ಹೇಳಿಕೆ ಅಲ್ಲಗಳೆದರು. ಅಲ್ಲದೆ ಬಜರಂಗದಳ ನೇತೃತ್ವದಲ್ಲಿ ನಡೆಯುವ ಶೋಭಾಯಾತ್ರೆಗೆ ಸಂಘ ಪರಿವಾರ ಹಾಗೂ ಬಿಜೆಪಿ ಬೆಂಬಲ ನೀಡಲಿದ್ದು, ಯಾರಿಗೂ ನೋವಾಗದಂತೆ ಯಶಸ್ವಿಯಾಗಿ ಆಚರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X