ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಾವಣಗೆರೆ : ಜೆಡಿಎಸ್ ಬಣಗಳ ಮಾರಾಮಾರಿ, 1 ಬಲಿ
ದಾವಣಗೆರೆ : ಜೆಡಿಎಸ್ನ ಎರಡು ಗುಂಪುಗಳ ನಡುವೆ ಹೊಡಿಗೆರೆ ಗ್ರಾಮದಲ್ಲಿ ಘರ್ಷಣೆ ನಡೆದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು, ಗ್ರಾಮದಲ್ಲಿ ಶನಿವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ರಾಜಕೀಯ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಶುಕ್ರವಾರ ರಾತ್ರಿ ಹೊಡೆದಾಟ ನಡೆದಿದ್ದು, ಚೆನ್ನಗಿರಿ ಪೊಲೀಸರ ಮಧ್ಯ ಪ್ರವೇಶದಿಂದ ಹೆಚ್ಚಿನ ಅನಾಹುತ ತಪ್ಪಿದೆ.
ದಾವಣಗೆರೆ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತ ವ್ಯಕ್ತಿಯನ್ನು ಸತೀಶ್(42) ಎಂದು ಗುರ್ತಿಸಲಾಗಿದೆ. ಈತ ಜಿಲ್ಲಾ ಪಂಚಾಯತ್ ಸದಸ್ಯ ಹೆಚ್. ರಮೇಶ್ರ ಸಂಬಂಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ 9ಮಂದಿಯನ್ನು ಬಂಧಿಸಲಾಗಿದ್ದು, ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಯಿತು. ಪೊಲೀಸರು ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ.
(ಯುಎನ್ಐ)
Story first published: Saturday, December 9, 2006, 23:53 [IST]