ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.20ರಂದು ಧರ್ಮ ದೀಕ್ಷೆ ಸುವರ್ಣ ಮಹೋತ್ಸವ ಆಚರಣೆ

By Staff
|
Google Oneindia Kannada News

ಬೆಂಗಳೂರು : ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬೌದ್ಧ ಧರ್ಮ ಸ್ವೀಕರಿಸಿ 50ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್‌ 20ರಂದು ಧರ್ಮ ದೀಕ್ಷೆ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್‌.ಮೂರ್ತಿ ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಸಮಿತಿಯು ಸಾಮಾಜಿಕ ಅಸಮಾನತೆ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಸುತ್ತಿದೆ. ಈ ಸಂದರ್ಭದಲ್ಲಿ ‘ಭಾರತದ ರಾಜಕೀಯ ಸುಧಾರಣೆ’, ‘ಜಾತಿ ಮತ್ತು ಮೀಸಲಾತಿ’, ‘ಕಾಂಗ್ರೆಸ್‌-ಗಾಂಧಿ ಮತ್ತು ದಲಿತರು’ ಎಂಬ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ ಸಾಧಕರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X