ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹೊಸವರ್ಷಕ್ಕೆ ಸಂಪುಟ ವಿಸ್ತರಣೆ : ಸಿಎಂ ಕುಮಾರಸ್ವಾಮಿ
ಬೆಂಗಳೂರು : ಹೊಸವರ್ಷದ ಕೊಡುಗೆಯಾಗಿ ರಾಜ್ಯ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಗಳವಾರ(ಡಿಸೆಂಬರ್ 26) ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹೊಸವರ್ಷದ ಆರಂಭದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಆದರೆ ಇದಕ್ಕೂ ಮೊದಲು ಸಚಿವರ ಕಾರ್ಯ ನಿರ್ವಹಣೆ ಬಗ್ಗೆ ಮೌಲ್ಯಮಾಪನ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ, ಜೆಡಿಎಸ್ನಲ್ಲಿ ತಲೆದೋರಿದ್ದ ಅಸಮಾಧಾನ ತಿಳಿಯಾಗಿದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ ಕಾರಣ ತಿಳಿಸಲಾಯಿತು. ಆನಂತರ ರಾಷ್ಟ್ರೀಯ ಮುಖಂಡರು ಒಪ್ಪಿಕೊಂಡರು.
ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕಿ ಅಟಲ್ ಬಿಹಾರಿ ವಾಜಪೇಯಿ ಅವರೂ ರಾಜ್ಯ ಮೈತ್ರಿ ಸರ್ಕಾರದ ಕಾರ್ಯವೈಖರಿ ಮೆಚ್ಚಿಕೊಂಡಿದ್ದಾರೆ ಎಂದು ಅವರು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)
Story first published: Wednesday, December 27, 2006, 23:53 [IST]