ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜ.5ರಂದು ಬಂದ್‌

By Staff
|
Google Oneindia Kannada News

ಬೆಂಗಳೂರು : ಕೃಷಿ ಉತ್ಪನ್ನ ವ್ಯಾಪಾರಿಗಳು ಜ.5ರಂದು ರಾಜ್ಯ ವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕಾಯ್ದೆಯ ತಿದ್ದುಪಡಿ ವಿರೋಧಿಸಿ ಮುಷ್ಕರ ನಡೆಸಲು ಮುಂದಾಗಿರುವುದಾಗಿ ಎಫ್‌ಕೆಸಿಸಿ ಅಧ್ಯಕ್ಷ ಡಾ.ಆರ್‌.ಸಿ.ಪುರೋಹಿತ್‌ ತಿಳಿಸಿದ್ದಾರೆ.

1966ರ ಎಪಿಎಂಸಿ ಕಾಯ್ದೆಗೆ ಕೇಂದ್ರದ ಸೂಚನೆಯನ್ವಯ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದ ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲವಾಗಲಿದೆ. ಸ್ಥಳೀಯ ಕೃಷಿ ಉತ್ಪನ್ನ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುತ್ತಾರೆ. ಎಂಟು ಲಕ್ಷ ವ್ಯಾಪಾರಿಗಳು ಬೀದಿ ಪಾಲಾಗುತ್ತಾರೆ. ಸರ್ಕಾರ ತನ್ನ ತೀರ್ಮಾನವನ್ನು ಮರು ಪರಿಶೀಲಿಸಬೇಕು ಎಂದು ಪುರೋಹಿತ್‌ ಆಗ್ರಹಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X