ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಏಪ್ರಿಲ್ನಿಂದ ಲಾಟರಿ ಮತ್ತು ಸಾರಾಯಿ ನಿಷೇಧ - ಸಿಎಂ
ಧರ್ಮಸ್ಥಳ : ಆನ್ಲೈನ್ ಸೇರಿದಂತೆ ಎಲ್ಲಾ ರೀತಿಯ ಲಾಟರಿಯನ್ನು ಮುಂದಿನ ಆರ್ಥಿಕ ವರ್ಷದಲ್ಲಿ ರದ್ದುಪಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ಅವರು, ಗ್ರಾಮೀಣ ಜನರು ಲಾಟರಿ ಚಟಕ್ಕೆ ಬಲಿಯಾಗಿದ್ದಾರೆ. ಸಮಾಜದ ನೆಮ್ಮದಿ ಕಾಯಲು, ಲಾಟರಿ, ಸಾರಾಯಿ ನಿಷೇಧಿಸಲು ಸರ್ಕಾರ ಮುಂದಾಗಿದೆ. ನಮ್ಮ ಸಂಕಲ್ಪಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.
ಲಾಟರಿ, ಸಾರಾಯಿ ನಿಷೇಧದಿಂದ ಬೊಕ್ಕಸಕ್ಕೆ ಹೊರೆ ಬೀಳಲಿದೆ ಎಂಬ ಮಾತು ಸತ್ಯ. ಆದರೆ ಪರ್ಯಾಯ ಮಾರ್ಗಗಳಿಂದ ಸಂಪನ್ಮೂಲ ಕ್ರೋಢಿಕರಿಸುತ್ತೇವೆ. ಜನರ ಹಿತಕ್ಕಿಂತ, ಸರ್ಕಾರದ ಆದಾಯ ಮುಖ್ಯವಲ್ಲ. ಅಲ್ಲದೇ ನಮ್ಮ ಸರ್ಕಾರ ರೈತರ ಸಾಲ ಮನ್ನ ಮಾಡಲು ಚಿಂತನೆ ನಡೆಸಿದೆ ಎಂದು ಕುಮಾರಸ್ವಾಮಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, January 4, 2007, 5:30 [IST]