ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹೈಜಾಕ್ ಬೆದರಿಕೆ : ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
ಬೆಂಗಳೂರು : ವಿಮಾನ ಅಪಹರಣದ ಬೆದರಿಕೆ ಹಿನ್ನೆಲೆಯಲ್ಲಿ, ಬೆಂಗಳೂರು ಸೇರಿದಂತೆ ರಾಷ್ಟ್ರದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರವಹಿಸಲಾಗಿದೆ.
ಬುಧವಾರ ಕಾಶ್ಮೀರಿ ಉಗ್ರರು ವಿಮಾನ ಅಪಹರಣ ಅಥವಾ ವಿದ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ, ಪೊಲೀಸರು ಮುನ್ನೆಚ್ಚರಿಕೆವಹಿಸಿದ್ದರು. ಬಿಗಿ ಬಂದೋಬಸ್ತು ಮುಂದುವರೆಯಲಿದೆ ಎಂದು ಪೌರ ನಾಗರೀಕ ವಿಮಾನ ಯಾನ ಸಚಿವಾಲಯದ ಮೂಲಗಳು ತಿಳಿಸಿವೆ.
ವಿಮಾನ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎನ್ನುವ ಒತ್ತಾಯಗಳು ಕೇಳಿಬರುತ್ತಿವೆ.
(ಏಜನ್ಸೀಸ್)
Comments
Story first published: Thursday, January 11, 2007, 5:30 [IST]