ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೊಟ್ಟೆ ತಿನ್ನುವುದಕ್ಕೆ ವಿರೋಧ ಸಲ್ಲದು - ಕುಮಾರಸ್ವಾಮಿ
ಬೆಂಗಳೂರು : ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆಯನ್ನೇ ವಿತರಣೆ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಚ್ಚಿನ ಆಸಕ್ತಿ ಪ್ರದರ್ಶಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಧಾರ್ಮಿಕ ಮುಖಂಡರು ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಮೊಟ್ಟೆ ಬದಲು ಬಾಳೆ ಹಣ್ಣು ನೀಡಲು ಸಲಹೆ ನೀಡಿದ್ದಾರೆ. ಆದರೆ ಬಾಳೆ ಹಣ್ಣಿಗಿಂತಲೂ ಮೊಟ್ಟೆಗೆ ಹೆಚ್ಚಿನಜನರು ಒಲವಿದೆ . ಬಹುಜನರ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.
ಮೊಟ್ಟೆ ನೀಡಿಕೆಯಿಂದ ರಾಜ್ಯದ ಕುಕ್ಕುಟ ಉದ್ಯಮಕ್ಕೆ ಅನುಕೂಲವಾಗಲಿದೆ. ಮೊಟ್ಟೆ ವಿರೋಧಿಸಿ ಪ್ರತಿಭಟನೆ ನಡೆಸುವುದನ್ನು ಕೈಬಿಡಬೇಕು ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಮನವಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, January 11, 2007, 5:30 [IST]