ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹವಾಮಾನ ವೈಪರೀತ್ಯ : ಮುಖ್ಯಮಂತ್ರಿ ಪ್ರವಾಸ ರದ್ದು
ಬೆಂಗಳೂರು: ಮೈಸೂರಿಗೆ ತೆರಳಬೇಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹವಾಮಾನ ವೈಪರೀತ್ಯದಿಂದಾಗಿ ತಮ್ಮ ಕಾರ್ಯಕ್ರಮ ರದ್ದುಪಡಿಸಿದ್ದಾರೆ.
ನಿಗದಿತ ಕಾರ್ಯಕ್ರಮದ ಪ್ರಕಾರ, ಕುಮಾರಸ್ವಾಮಿ ಮೈಸೂರಿನ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರು ದೂರದರ್ಶನ ಕೇಂದ್ರದ ಹಲೋ ಸಿಎಂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.
ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪ್ರಯಾಣ ಸಾಧ್ಯವಾಗಲಿಲ್ಲ. ಹಾಗಾಗಿ ಕೊನೆಗಳಿಗೆಯಲ್ಲಿ ಈ ಪ್ರವಾಸ ರದ್ದುಪಡಿಸಲಾಯಿತು ಎಂದು ಮುಖ್ಯಮಂತ್ರಿ ಗೃಹ ಕಚೇರಿ ಮೂಲಗಳು ಹೇಳಿವೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, January 14, 2007, 5:30 [IST]