ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ವಿಸರ್ಜಿಸಿ : ದೇವೇಗೌಡ ವಿರೋಧಿ ಬಣದ ಒತ್ತಾಯ

By Staff
|
Google Oneindia Kannada News

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಕಾಲಕ್ಕೆ ನಡೆಸದ ರಾಜ್ಯ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ವಿಸರ್ಜಿಸಬೇಕೆಂದು, ಜೆಡಿಎಸ್‌ನ ದೇವೇಗೌಡ ವಿರೋಧಿ ಬಣ ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಅವರನ್ನು ಒತ್ತಾಯಿಸಿದೆ.

ಸುರೇಂದ್ರ ಮೋಹನ್‌ ನೇತೃತ್ವದ ಜೆಡಿಎಸ್‌ ನಾಯಕರು ಸೋಮವಾರ(ಜನವರಿ 15) ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ರಾಜ್ಯದ 222 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 215 ತಮ್ಮ ಅವಧಿ ಪೂರ್ಣಗೊಳಿಸಿವೆ. ಆದರೆ ರಾಜ್ಯ ಸರ್ಕಾರ ಸಕಾಲದಲ್ಲಿ ಚುನಾವಣೆ ನಡೆಸಲು ವಿಫಲವಾಗುವುದರ ಮೂಲಕ, ಸಾಂವಿಧಾನಿಕ ಕರ್ತವ್ಯಗಳನ್ನು ಈಡೇರಿಸಿಲ್ಲ. ಹಾಗಾಗಿ ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಅವರು ಸರ್ಕಾರ ವಿಸರ್ಜನೆಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬೇಕೆಂದು ಅವರು ಒತ್ತಾಯಿಸಿದರು.

ಪಕ್ಷದ ಅಧ್ಯಕ್ಷ ಎಚ್‌.ಏಕಾಂತಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್‌.ಸಿಂಧ್ಯಾ ಮಾತನಾಡಿ, ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಕುರಿತು ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಅವರು ಕ್ರಮ ಕೈಗೊಳ್ಳುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X