ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅತ್ತಿಬೆಲೆ ಬಳಿ ಬಸ್ಸು ಮತ್ತು ವ್ಯಾನು ಡಿಕ್ಕಿ : ನಾಲ್ವರು ಭಸ್ಮ
ಬೆಂಗಳೂರು : ಖಾಸಗಿ ಬಸ್ಸೊಂದಕ್ಕೆ ಹಾಲಿನ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ, ಬಸ್ಸಿಗೆ ಬೆಂಕಿ ಬಿದ್ದು , ನಾಲ್ವರು ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ ಹೊಸೂರು ರಸ್ತೆಯ ಅತ್ತಿಬೆಲೆ ಬಳಿಯ ಜೆಸ್ಟ್ಲೆನ್ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. ಹೊಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ, ಹಿಮ್ಮುಖವಾಗಿ ಚಲಿಸುತ್ತಿದ್ದ ಹಾಲಿನ ವ್ಯಾನ್ ಡಿಕ್ಕಿ ಹೊಡೆಯಿತು. ಈ ಸಂದರ್ಭದಲ್ಲಿ ಬಸ್ನ ಚಾಲಕ, ರಸ್ತೆ ದಾಟುತ್ತಿದ್ದ ಪಾದಚಾರಿಗಳು ಸೇರಿದಂತೆ ನಾಲ್ವರು ಅಗ್ನಿಗಾಹುತಿಯಾದರು.
ಬೆಂಕಿ ಹತ್ತಿಕೊಂಡ ತಕ್ಷಣ ಪ್ರಯಾಣಿಕರು ಹೊರ ಜಿಗಿದರು. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
(ಏಜನ್ಸೀಸ್)
Comments
Story first published: Wednesday, January 17, 2007, 5:30 [IST]