ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಿವಾಜಿನಗರ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆ ತೆರವು
ಬೆಂಗಳೂರು : ಶಿವಾಜಿನಗರ, ಭಾರತಿನಗರ ಮತ್ತು ಫ್ರೇಜರ್ ಟೌನ್ ಪೊಲೀಸ್ ಠಾಣೆ ಮಿತಿಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಭಾನುವಾರ ಬೆಳಗ್ಗೆಯಿಂದ ತೆಗೆದುಹಾಕಲಾಗಿದೆ.
ಈ ಪ್ರದೇಶಗಳಲ್ಲಿ ಜನಜೀವನ ಸಾಮಾನ್ಯಸ್ಥಿತಿಗೆ ಮರಳಿದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಾಪಸುಪಡೆಯಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಇನ್ನೂ ಕೆಲಕಾಲ ರಾಜ್ಯ ಮೀಸಲು ಪೊಲೀಸ್ ಪಡೆ ತುಕಡಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಲಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಕಳೆದ ಭಾನುವಾರ(ಜನವರಿ 21) ಶಿವಾಜಿನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೋಮುಗಲಭೆ ಉಂಟಾಗಿದ್ದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂದಹಾಗೆ ಗಲಭೆ ಸಂದರ್ಭದಲ್ಲಿ, ಸುಮಾರು 1.5ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ನಷ್ಟವಾಗಿದೆ ಎಂದು ಪೊಲೀಸರು ಅಂದಾಜು ಮಾಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, January 28, 2007, 5:30 [IST]