‘ಬಡ-ರೈತರ ಕಲ್ಯಾಣ’ಕ್ಕೆ ಹಣ ಸಂಗ್ರಹಕ್ಕೆ ತೆರಿಗೆ ಹೆಚ್ಚಳ?

ಬೆಂಗಳೂರು : ಸಾರಾಯಿ ಮತ್ತು ಲಾಟರಿ ನಿಷೇಧ, ರೈತರ ಸಾಲ ಮನ್ನಾ ಮತ್ತಿತರ ಯೋಜನೆಗಳನ್ನು ಹಾಕಿಕೊಂಡಿರುವ ರಾಜ್ಯಸರ್ಕಾರ, ಸಂಪನ್ಮೂಲ ಕ್ರೋಡೀಕರಿಸಲು ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ಈ ಸೂಚನೆ ನೀಡಿರುವ ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಸಾವಿರಾರು ಕೋಟಿ ರೂಪಾಯಿ ಅಗತ್ಯ. ಹೀಗಾಗಿ ಕೆಲವು ತೆರಿಗೆಗಳನ್ನು ಹೆಚ್ಚಿಸಲು ಚಿಂತನೆ ನಡೆದಿದೆ ಎಂದರು.

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಅಧಿಕಾರವಧಿಯಲ್ಲಿ ಅನೇಕ ಮಹತ್ವದ ಕಾರ್ಯಕ್ರಮಗಳು ಜಾರಿಗೆ ಬರಲಿವೆ. ಪೂರ್ಣ ಅಧಿಕಾರವಧಿಯನ್ನು ಈ ಸರ್ಕಾರ ಪೂರೈಸಲಿದೆ. ರೈತರು ಮತ್ತು ಬಡವರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+