ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಾವಣಗೆರೆ ಬಳಿ ಅಪಘಾತ: 3ಸಾವು, 18ಮಂದಿಗೆ ಗಾಯ
ದಾವಣಗೆರೆ: ಲಾರಿಗಳೆರಡು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, 18ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.
ನಗರದಿಂದ 60ಕಿಲೋ ಮೀಟರ್ ದೂರದಲ್ಲಿರುವ ಹಿರೇಮಲ್ಲನಹೊಳೆ ಬಳಿ, ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಜಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಿಂದ ಹೊಸಪೇಟೆಯತ್ತ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.
ಮೃತರನ್ನು ಬೆಂಗಳೂರಿನ ನಂದಿನಿ ಲೇಔಟ್ನ ನಿಂಗಮ್ಮ(21), ಸುವರ್ಣ(10) ಹಾಗೂ ರಾಮಣ್ಣ(38) ಎಂದು ಗುರುತಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠೆ ಸೋನಿಯಾ ನಾರಂಗ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
(ಏಜನ್ಸೀಸ್)
Comments
Story first published: Sunday, February 4, 2007, 5:30 [IST]