ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸರ ಮೇಲೆ ಹಲ್ಲೆ, ಪುತ್ತೂರಿನಲ್ಲಿ ನಿಷೇಧಾಜ್ಞೆ

By Staff
|
Google Oneindia Kannada News

ಬೆಂಗಳೂರು:ಶೋಭಾಯಾತ್ರೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ರಾಮಸೇನಾ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ್ದರಿಂದ ಮಂಗಳೂರು ಜಿಲ್ಲೆಯ ಪುತ್ತೂರಿನಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಶನಿವಾರ(ಫೆಬ್ರವರಿ 03) ರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸರು ಗಲಾಟೆ ತಡೆಯುವ ನಿಟ್ಟಿನಲ್ಲಿ ಲಾಠಿ ಚಾರ್ಜ್‌ ಮಾಡಿದರೂ ಉಪಯೋಗವಾಗಲಿಲ್ಲ. ಆನಂತರ ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಬೇಕಾಯಿತು.

ಘಟನೆಗೆ ಸಂಬಂಧಿಸಿದಂತೆ ಹಲವು ಜನರನ್ನು ಬಂಧಿಸಲಾಗಿದ್ದು, ಹೆಚ್ಚುವರಿ ಪಡೆಗಳು ಸ್ಥಳಕ್ಕೆ ಆಗಮಿಸಿ ತೀವ್ರ ಕಟ್ಟೆಚ್ಚರ ವಹಿಸಿವೆ ಎಂದು ಮೂಲಗಳು ಹೇಳಿವೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X