ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾವೇರಿದ ವಾತವರಣ ಶಾಲಾ ಕಾಲೇಜಿಗೆ ರಜೆ
ಬೆಂಗಳೂರು : ಕಾವೇರಿ ಪ್ರಾಧಿಕಾರದ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ (ಫೆ.6) ದಂದು ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಕಾನೂನು ವ್ಯವಸ್ಥೆ ಪರಿಸ್ಥಿತಿ ನೋಡಿಕೊಂಡು ರಜೆ ಮುಂದುವರೆಸುವುದಕ್ಕೆ ಅಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಯುಕ್ತ ಎಂ. ಮದನ ಗೋಪಾಲ್ ಹೇಳಿದ್ದಾರೆ.
ಕಾವೇರಿ ಪ್ರಾಧಿಕಾರದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಖಂಡಿಸಿ ಫೆ.8 ರಂದು ಡಾ.ರಾಜ್ ಅಭಿಮಾನಿಗಳ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗುರುವಾರ(ಫೆ.8)ದಂದು ಕೂಡ ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಇರುತ್ತದೆ.
(ದಟ್ಸ್ ಕನ್ನಡವಾರ್ತೆ)
Story first published: Tuesday, February 6, 2007, 5:30 [IST]