ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸೋಮವಾರದ ಕರ್ನಾಟಕ ಬಂದ್ ಹಿನ್ನೆಲೆ ಶಾಲೆಗೆ ರಜೆ
ಬೆಂಗಳೂರು : ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪು ವಿರೋಧಿಸಿ, ಸೋಮವಾರ(ಫೆ. 12) ನಡೆಯಲಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಅಂದು ಕಾಲೇಜುಗಳಿಗೂ ರಜೆ ನೀಡುವ ಸಾಧ್ಯತೆ ಇದೆ. ಆದರೆ ಸರ್ಕಾರ ಕಾಲೇಜುಗಳಿಗೆ ಅಧಿಕೃತ ರಜೆ ಘೋಷಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಿ.ಎಚ್.ಶಂಕರಮೂರ್ತಿ ಹೇಳಿದ್ದಾರೆ.
ಜಿಲ್ಲಾ ಮತ್ತು ತಾಲೂಕುಗಳಲ್ಲಿರುವ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು, ಪರಿಸ್ಥಿತಿ ನೋಡಿಕೊಂಡು ರಜೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, February 10, 2007, 5:30 [IST]