ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಂಜೆ 6ರತನಕ ಕೆಎಸ್ಸಾರ್ಟಿಸಿ-ಬಿಎಂಟಿಸಿ ಬಸ್ಸೇವೆ ಸ್ಥಗಿತ
ಬೆಂಗಳೂರು : ರಾಜ್ಯ ಬಂದ್ ಹಿನ್ನೆಲೆಯಲ್ಲಿ ಸೋಮವಾರ ಸಂಜೆ 6ರವರೆಗೆ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ, ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಸಂಜೆ 6 ಗಂಟೆ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಎದುರಾಗದಿದ್ದಲ್ಲಿ, ಬಸ್ ಸೇವೆ ಎಂದಿನಂತೆ ಮುಂದುವರಿಯಲಿದೆ. ಆದರೆ ಆಸ್ಪತ್ರೆ ವಿಶೇಷ ಸೇವಾ ಬಸ್ಗಳು ಎಂದಿನಂತೆ ಸಂಚರಿಸುತ್ತಿದ್ದು, ತುರ್ತು ಅಗತ್ಯಗಳಿಗಾಗಿ ಆರು ಬಸ್ಗಳ ಸೇವೆಯನ್ನು ಬಿಎಂಟಿಸಿ ನಗರದಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಆರಂಭಿಸಿದೆ.
ಸಂಸ್ಥೆಯ ಬಸ್ ಹಾಗೂ ಸಿಬ್ಬಂದಿಗೆ ಯಾವುದೇ ಹಾನಿ ಸಂಭವಿಸದಂತೆ ತಡೆಯುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ, ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಸಂಜೆ 6 ಗಂಟೆವರೆಗೆ ರಾಜ್ಯದೊಳಗೆ ಹಾಗೂ ಹೊರಗೆ ಸಂಚರಿಸುವ ಎಲ್ಲ ಮಾರ್ಗಗಳಲ್ಲೂ ಬಸ್ ಸೇವೆ ಹಿಂತೆಗೆದುಕೊಳ್ಳಲಾಗಿದೆ ಎಂದು ಕೆಎಸ್ಆರ್ಟಿಸಿ ಭದ್ರತೆ ಮತ್ತು ಜಾಗೃತ ವಿಭಾಗದ ನಿರ್ದೇಶಕ ಭಾಸ್ಕರರಾವ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, February 12, 2007, 5:30 [IST]