ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಿಕೆಶಿ ಸಂಬಂಧಿಕರ ಜತೆಗೆ 22 ಜನರ ಮೇಲೆ ಗಣಿ ಕೇಸು
ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಸೋದರ ಡಿ.ಕೆ. ಸುರೇಶ್ ಸೇರಿದಂತೆ 22 ಜನರ ಮೇಲೆ ರಾಜ್ಯ ಸರ್ಕಾರ ಮೊಕದ್ದಮೆ ದಾಖಲಿಸಿದೆ.
ರಾಮನಗರ, ಚನ್ನಪಟ್ಟಣ, ಮತ್ತು ಕನಕಪುರದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಕಾಂಗ್ರೆಸ್ನ ಶಾಸಕ ರೋಶನ್ ಬೇಗ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸರ್ಕಾರ ಈ ವಿಷಯ ತಿಳಿಸಿದೆ.
ಕಂದಾಯ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯ ಮೂಲಕ ಗ್ರಾಮಾಂತರ ಪ್ರದೇಶದ ಗಣಿ ಸರ್ವೆ ಮಾಡಲಾಗುವುದು. ಸರ್ವೆ ಕಾರ್ಯ ಮುಗಿಯುವವರೆಗೂ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ. ಅಕ್ರಮಸಾಗಾಣಿಕೆ ತಡೆಗಟ್ಟಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಎಂದು ಮುಖ್ಯಮಂತ್ರಿ ತಮ್ಮ ಲಿಖಿತರೂಪದ ಉತ್ತರ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Wednesday, February 14, 2007, 5:30 [IST]