ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಶುಕ್ಲ ಇನ್ನಿಲ್ಲ

By Staff
|
Google Oneindia Kannada News

ರಾಯ್‌ಪುರ್‌ : ಹಿರಿಯ ಕಾಂಗ್ರೆಸ್‌ ನಾಯಕ, ಅವಿಭಜಿತ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ಯಾಮಚರಣ್‌ ಶುಕ್ಲ(82) ಅನಾರೋಗ್ಯದಿಂದ ಬುಧವಾರ ನಿಧನರಾದರು.

ಹೃದಯ, ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಕಳೆದ ಕೆಲವು ತಿಂಗಳಿಂದ ಅವರು ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳಿಂದ ಕೃತಕ ಉಸಿರಾಟ ವ್ಯವಸ್ಥೆಯನ್ನು ಅವರಿಗೆ ಕಲ್ಪಿಸಲಾಗಿತ್ತು. ಮಂಗಳವಾರ ಮುಂಜಾನೆ 4ರಲ್ಲಿ ನಿಧನರಾದ ಅವರ ಅಂತ್ಯಕ್ರಿಯೆ ಸಂಜೆ 4ಗಂಟೆಗೆ ಮಹದೇವ್‌ ಘಾಟ್‌ನಲ್ಲಿ ನೆರವೇರಲಿದೆ.

ಮೂರು ಸಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವರು ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮಧ್ಯಪ್ರದೇಶದ ಮೊದಲ ಮುಖ್ಯಮಂತ್ರಿ ಪಂಡಿತ್‌ ರವಿಶಂಕರ್‌ ಶುಕ್ಲ ಅವರ ಪುತ್ರರಾಗಿದ್ದ ಎಸ್‌.ಸಿ.ಶುಕ್ಲ, 1957, 1969, 1989ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X