ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಗೀತ ವಿಶ್ವವಿದ್ಯಾಲಯ ಸ್ಥಾಪನೆ: ಮುಖ್ಯಮಂತ್ರಿಒಲವು

By Staff
|
Google Oneindia Kannada News

ಬೆಂಗಳೂರು : ಸಂಗೀತ ಬ್ರಹ್ಮ ಬಾಲಮುರಳಿಕೃಷ್ಣ ಅವರ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಸಂಗೀತ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ.

ಶತಮಾನದ ಸಂಗೀತಗಾರ ಎಂಬ ಬಿರುದಿನೊಂದಿಗೆ ಬಾಲಮುರಳಿಕೃಷ್ಣರನ್ನು ನಗರದ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಜೊತೆಗೆ ಅದ್ವೈತ ಪ್ರತಿಷ್ಠಾನ, ಜೀವಮಾನ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಿತು.

ಬಾಲಮುರಳಿ ಕೃಷ್ಣ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕೆಂದು, ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ರಾಮಚಂದ್ರಗೌಡ ಒತ್ತಾಯಿಸಿದರು.

ಕರ್ನಾಟಕ ಹೈಕೋರ್ಟ್‌ನ ಎಸ್‌.ಶ್ರೀಧರ್‌ ರಾವ್‌, ಕೆ.ಭಕ್ತವತ್ಸಲ, ಎಚ್‌.ಬಿಲ್ಲಪ್ಪ, ಕೇಂದ್ರ ಸಚಿವ ಎಂ.ವಿ.ರಾಜಶೇಖರನ್‌ ಮತ್ತಿತರರು ಹಾಜರಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X