ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ ಅಸಹಕಾರದಿಂದ ಸದ್ಯದಲ್ಲೇ ಕತ್ತಲ ಕರ್ನಾಟಕ!

By Staff
|
Google Oneindia Kannada News

ಬೆಂಗಳೂರು : ಮುಂಬರುವ ದಿನಗಳಲ್ಲಿ ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ, ಅನಿಯಮಿತ ಲೋಡ್‌ ಶೆಡ್ಡಿಂಗ್‌ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎಂದು ವಿದ್ಯುತ್‌ ಪ್ರಸರಣ ನಿಗಮ ಸೋಮವಾರ ಪ್ರಕಟಿಸಿದೆ.

ಬೇಸಿಗೆಯಲ್ಲಿ ಹೆಚ್ಚಿನ ವಿದ್ಯುತ್‌ ಪೂರೈಕೆ ಮಾಡಲು ಅಗತ್ಯವಿರುವ 500 ಮೆ.ವ್ಯಾ. ವಿದ್ಯುಚ್ಛಕ್ತಿ ಯ ಪೂರೈಕೆಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ಮುಖ್ಯಮಂತ್ರಿ ವಿಶ್ವಾಸ : ಕೇಂದ್ರ ವಿದ್ಯುತ್‌ ಖಾತೆ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ರಾಜ್ಯದ ಮನವಿಯನ್ನು ಪುರಸ್ಕರಿಸಲಿಲ್ಲ . ಅದರೆ ರಾಜ್ಯಕ್ಕೆ ತೊಂದರೆಯಾಗದಂತೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ, ಈ ಮಧ್ಯೆ ಸುದ್ದಿಗಾರರಿಗೆ ಹೇಳಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X