ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೇಂದ್ರದ ಅಸಹಕಾರದಿಂದ ಸದ್ಯದಲ್ಲೇ ಕತ್ತಲ ಕರ್ನಾಟಕ!
ಬೆಂಗಳೂರು : ಮುಂಬರುವ ದಿನಗಳಲ್ಲಿ ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ, ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎಂದು ವಿದ್ಯುತ್ ಪ್ರಸರಣ ನಿಗಮ ಸೋಮವಾರ ಪ್ರಕಟಿಸಿದೆ.
ಬೇಸಿಗೆಯಲ್ಲಿ ಹೆಚ್ಚಿನ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಿರುವ 500 ಮೆ.ವ್ಯಾ. ವಿದ್ಯುಚ್ಛಕ್ತಿ ಯ ಪೂರೈಕೆಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.
ಮುಖ್ಯಮಂತ್ರಿ ವಿಶ್ವಾಸ : ಕೇಂದ್ರ ವಿದ್ಯುತ್ ಖಾತೆ ಸಚಿವ ಸುಶೀಲ್ ಕುಮಾರ್ ಶಿಂಧೆ ರಾಜ್ಯದ ಮನವಿಯನ್ನು ಪುರಸ್ಕರಿಸಲಿಲ್ಲ . ಅದರೆ ರಾಜ್ಯಕ್ಕೆ ತೊಂದರೆಯಾಗದಂತೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಈ ಮಧ್ಯೆ ಸುದ್ದಿಗಾರರಿಗೆ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, February 19, 2007, 5:30 [IST]