ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನವದೆಹಲಿಯಲ್ಲಿ ರಕ್ಷಣಾ ವೇದಿಕೆಯಿಂದ ಕಾವೇರಿ ಕಹಳೆ
ಬೆಂಗಳೂರು : ರಾಷ್ಟ್ರದ ರಾಜಧಾನಿಯಲ್ಲಿ ಕಾವೇರಿ ಹೋರಾಟವನ್ನು ನಡೆಸಿ, ಕೇಂದ್ರ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ.
ಕಾವೇರಿ ನ್ಯಾಯಮಂಡಲಿ ತೀರ್ಪು ವಿರೋಧಿಸಿ, ಕರ್ನಾಟಕ್ಕೆ ಆದ ಅನ್ಯಾಯ ವಿವರಿಸಲು ಮಾ.2ರಂದು ದೆಹಲಿಯ ಜಂತರ್ ಮಂತರ್ ಬಳಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಮ್ಮ ನಾಡಿನ ರೈತರಿಗೆ ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಯಲಿದೆ. ಹೋರಾಟ ಹಿಂಸಾರೂಪ ತಾಳುವ ಮುನ್ನ ಕೇಂದ್ರ ಸರ್ಕಾರ, ಈ ಬಗ್ಗೆ ಗಮನಹರಿಸಬೇಕು ಎಂದು ಎಚ್ಚರಿಸಿದ್ದಾರೆ.
ರಾಷ್ಟ್ರಕವಿ ಅಭಿಪ್ರಾಯ : ಕಾವೇರಿ ನ್ಯಾಯಮಂಡಳಿಯ ಸಾವಿರ ಪುಟಗಳ ತೀರ್ಪಿನ ಸಾರವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆಯಬೇಕು. ಆ ಮೂಲಕ ಕನ್ನಡಿಗರಲ್ಲಿ ಜಾಗೃತಿ ಸಾಧ್ಯವಾಗುತ್ತದೆ ಎಂದು ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ನಗರದ ಸಮಾರಂಭವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, February 22, 2007, 5:30 [IST]