ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವಪಕ್ಷ ಸಭೆ : ನ್ಯಾಯಮಂಡಳಿ ತೀರ್ಪಿಗೆ ಧಿಕ್ಕಾರ

By Staff
|
Google Oneindia Kannada News

ಬೆಂಗಳೂರು : ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪಿನ ಹಿನ್ನೆಲೆಯಲ್ಲಿ ನಡೆದ ಸರ್ವಪಕ್ಷ ಮುಖಂಡರ ಸಭೆ ತೀರ್ಪನ್ನು ಸಂಪೂರ್ಣವಾಗಿ ವಿರೋಧಿಸಿದೆ.

ಶನಿವಾರ(ಫೆಬ್ರವರಿ 24) ನಡೆದ ಸಭೆಯ ನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನ್ಯಾಯಮಂಡಳಿ ತೀರ್ಪಿನ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ಬದ್ಧ ಎಂದು ಸರ್ವಪಕ್ಷ ಮುಖಂಡರು ಘೋಷಿಸಿದ್ದಾರೆ ಎಂದು ತಿಳಿಸಿದರು.

ತೀರ್ಪು ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿರುವುದರಿಂದ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಭೆ ಒಕ್ಕೊರಲಿನಿಂದ ಅಭಿಪ್ರಾಯಪಟ್ಟಿದೆ.

ಮೇಲ್ಮನವಿ ಸಲ್ಲಿಸಲು ಒಟ್ಟು 90ದಿನಗಳ ಕಾಲಾವಕಾಶ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದಪರ ಸಮರ್ಥ ವಾದ ಮಂಡಿಸಿದ ವಕೀಲರು ಹಾಗೂ ನೀರಾವರಿ ತಜ್ಞರ ಸಲಹೆ ಪಡೆದು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಅವರು ವಿವರಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X