ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನ ಬಜೆಟ್‌ನಲ್ಲಿ ಬೇವು ಹೆಚ್ಚೋ? ಬೆಲ್ಲ ಹೆಚ್ಚೋ?

By Staff
|
Google Oneindia Kannada News

ನವದೆಹಲಿ : ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಬುಧವಾರ 2007-08ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ.

ಹಣದುಬ್ಬರ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದೆಡೆ ಆತಂಕವಿದ್ದರೂ, ಪಿ.ಚಿದಂಬರಂ ಮಂಡಿಸಲಿರುವ ಬಜೆಟ್‌ ಹಣದುಬ್ಬರಕ್ಕೆ ಕಡಿವಾಣ ಹಾಕಬಹುದು ಎಂಬ ನಿರೀಕ್ಷೆ ದಟ್ಟವಾಗಿದೆ. ಬಹು ನಿರೀಕ್ಷಿತ ಬಜೆಟ್‌ ಬಗ್ಗೆ ದೇಶದ ಜನತೆ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಬಜೆಟ್‌ ಶ್ರೀಸಾಮಾನ್ಯರ ಮೆಚ್ಚುಗೆ ಗಳಿಸೀತೇ ಎಂಬ ಪ್ರಶ್ನೆಯೂ ಸಹಜವಾಗಿಯೇ ಇದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಶ್ರೀಸಾಮಾನ್ಯರ ಕೋಪಕ್ಕೆ ಗುರಿಯಾಗಿರುವ ಸರ್ಕಾರ, ಬೆಲೆ ಇಳಿಕೆ ಮಾಡುವ ಮೂಲಕ ಪ್ರೀತಿ ಗಳಿಸುವ ಕಸರತ್ತು ನಡೆಸಲಿದೆ ಎನ್ನಲಾಗಿದೆ. ಅಲ್ಲದೆ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳಿಗೆ ಸರ್ಕಾರ ಮುಂದಾಗದು ಎಂದು ನಿರೀಕ್ಷಿಸಲಾಗಿದೆ.

ಈ ಮೊದಲು ವಾರ್ಷಿಕ 1ಲಕ್ಷ ರೂಪಾಯಿಗಳವರೆಗೆ ಸಂಪಾದಿಸುವವರಿಗೆ ತೆರಿಗೆ ವಿನಾಯ್ತಿ ನೀಡಲಾಗಿತ್ತು. ಅದನ್ನು ಈ ಬಾರಿ 1.50ಲಕ್ಷ ರೂ.ಗಳಿಗಿಂತ ಹೆಚ್ಚು ಗಳಿಸುವವರಿಗೂ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆಗಳಿವೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X