ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆನ್ನತ್ತಿದ ಅನಾರೋಗ್ಯ; ರವಿ ಬೆಳಗೆರೆ ಆಸ್ಪತ್ರೆಗೆ ದಾಖಲು
ಬೆಂಗಳೂರು : ಪತ್ರಕರ್ತ ರವಿಬೆಳಗೆರೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರ ವಿಶ್ರಾಂತಿ ಪಡೆಯಲು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆಪಡೆಯುತ್ತಿದ್ದಾರೆ. ತೀವ್ರ ಕೆಲಸದ ಒತ್ತಡದಿಂದಾಗಿ ರಕ್ತದಲ್ಲಿನ ಸಕ್ಕರೆ ಅಂಶ ಆಧಿಕಗೊಂಡು ಅವರು ಅಸ್ವಸ್ಥರಾಗಿದ್ದಾರೆ. ವಾರದ ಹಿಂದಷ್ಟೇ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಂಡು, ಬೆಳಗೆರೆ ಮನೆಗೆ ಮರಳಿದ್ದರು.
ವಿಶ್ರಾಂತಿಯಲ್ಲಿರುವ ರವಿಬೆಳಗೆರೆ ಒಂದು ವಾರಗಳ ಕಾಲ ಕಚೇರಿಯಲ್ಲಿ ಸಿಗುವುದಿಲ್ಲ ಎಂದು ಕುಟುಂಬದ ಮೂಲಗಳು ಹೇಳಿವೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, March 3, 2007, 5:30 [IST]