ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆಎಸ್ಸಿಎ ಅಧ್ಯಕ್ಷ ಚುನಾವಣೆ: ಒಡೆಯರ್Vs ವಿಶ್ವನಾಥ್
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲು, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಜಿ.ಆರ್.ವಿಶ್ವನಾಥ್ ನಿರ್ಧರಿಸಿದ್ದಾರೆ.
ಕೆಎಸ್ಸಿಎ ವತಿಯಿಂದ ನೀಡಲಾದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್, ಸಂಸ್ಥೆಯ ಉಪಾಧ್ಯಕ್ಷನಾದ ನಾನು, ಅಧ್ಯಕ್ಷ ಸ್ಥಾನಕ್ಕೆ ಸಹಜವಾಗಿಯೇ ಆಸಕ್ತನಾಗಿದ್ದೇನೆ ಎಂದಿದ್ದಾರೆ.
ವಿಶ್ವನಾಥ್ ನಿರ್ಧಾರದಿಂದ, ಅಧ್ಯಕ್ಷ ಸ್ಥಾನದ ಚುನಾವಣೆ ರಂಗೇರುವ ಸಾಧ್ಯತೆಗಳಿವೆ. ಸದ್ಯಕ್ಕೆ ಈ ಸ್ಥಾನದ ಮೇಲೆ ಮೈಸೂರು ರಾಜವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕಣ್ಣಿಟ್ಟಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದಾಗಿ ಒಡೆಯರ್ ಕಳೆದವರ್ಷವೇ ಹೇಳಿದ್ದರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Sunday, March 11, 2007, 5:30 [IST]