ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಸ್ಥಾನ ಬೇಡ -ಇನ್ಫೋಸಿಸ್‌ ನಾರಾಯಣಮೂರ್ತಿ

By Staff
|
Google Oneindia Kannada News

ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ನನಗೆ ಆಸಕ್ತಿ ಇಲ್ಲ ಎಂದು ಇನ್ಫೋಸಿಸ್‌ ನಾರಾಯಣಮೂರ್ತಿ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಜೂನ್‌ನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಗಳಲ್ಲಿ ನಾವು ಒಬ್ಬರೆಂಬ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ. ಇಂತಹ ವಿಚಾರಗಳು ಬಂದಾಗ, ಪತ್ರಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಮಾಹಿತಿಯನ್ನು ಖಚಿತಪಡಿಸಿಕೊಂಡು, ಸುದ್ದಿ ಬರೆಯಬೇಕು ಎಂದು ಸಲಹೆ ನೀಡಿದರು.

ನಂತರ ಐಟಿ ಬಗ್ಗೆ ಮಾತು ಆರಂಭಿಸಿದ ನಾರಾಯಣಮೂರ್ತಿ, ಬೆಂಗಳೂರಿನಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಬೇಕು. ಜಗತ್ತಿನ ವಿವಿಧ ಉದ್ಯಮಗಳನ್ನು ಆಹ್ವಾನಿಸಬೇಕು ಎಂದು ಅಭಿಪ್ರಾಯಪಟ್ಟರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X