ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಕ್ಕಾಗಿ ಪ್ರಾಣಕೊಟ್ಟ ಭಗತ್‌ಗೆ ಎರಡು ಹನಿ ಕಂಬನಿ!

By Staff
|
Google Oneindia Kannada News

ಬೆಂಗಳೂರು : ಭಗತ್‌ ಸಿಂಗ್‌ಗೆ ಗೌರವ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ, ಶುಕ್ರವಾರ ನಗರದಲ್ಲಿ ನಡೆಯಲಿದೆ.

ಮಾ.23 ದೇಶಪ್ರೇಮಿಗಳಾದ ಭಗತ್‌ ಸಿಂಗ್‌, ಸುಖದೇವ್‌ ಮತ್ತು ರಾಜ್‌ಗುರ್‌ ಅವರನ್ನು ಗಲ್ಲಿಗೇರಿಸಿದ ದಿನ(23.03.1931). ಈ ದಿನ ಭಗತ್‌ಸಿಂಗ್‌ರ 75ನೇ ಪುಣ್ಯತಿಥಿಯೂ ಹೌದು.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಸ್ಮರಿಸಲು, ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಗಾಂಧಿ ವಿಗ್ರಹದ ಬಳಿ ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಕಾರ್ಯಕ್ರಮವೊಂದು ನಡೆಯಲಿದೆ. ಸಮಾಜ ಸೇವಕರ ಸಮಿತಿ ಈ ಕಾರ್ಯಕ್ರಮವನ್ನು ಸಂಘಟಿಸಿದೆ.

ಭಗತ್‌ ಸಿಂಗ್‌ರ ಕನಸುಗಳನ್ನು ನನಸು ಮಾಡಲು ಯುವಕರು ಮುಂದಾಗಬೇಕು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ, ನೈಜ ರಾಷ್ಟ್ರ ನಾಯಕರಿಗೆ ಗೌರವ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X